20.3 C
Bengaluru
Saturday, February 8, 2025

ಮಕ್ಕಳ ಆರೈಕೆ ನಮ್ಮ ಕರ್ತವ್ಯ:ಡಾ. ಕೆ. ಸುಧಾಕರ್

Date:

ಮಾಗಡಿರಸ್ತೆಯಲ್ಲಿರುವ ಆರೋಗ್ಯಸೌಧದಲ್ಲಿ ಅಧಿಕಾರಿ, ಸಿಬ್ಬಂದಿಗಳ ಮಕ್ಕಳ ಲಾಲನೆ, ಪಾಲನೆಗಾಗಿ ಡೇ ಕೇರ್ ಸೆಂಟರ್ ಆನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ, ಸಚಿವ ಡಾ. ಕೆ. ಸುಧಾಕರ್ ಲೋಕಾರ್ಪಣೆ ಮಾಡಿದರು.
ಇದನ್ನು ಮಾದರಿ ಕೇಂದ್ರವಾಗಿ ನಿರ್ಮಿಸಲಾಗಿದೆ. ಮಕ್ಕಳಿಗೆ ಅಗತ್ಯವಾಗಿರುವ ಆಟದ ಪರಿಕರಗಳು ಮತ್ತಿತರ ಸೌಭಲ್ಯವನ್ನು ಒದಗಿಸಲಾಗಿದೆ.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತ ಡಿ. ರಂದೀಪ್, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ಡಾ. ಕೆ. ಸುಧಾಕರ್ ಮಾತನಾಡಿ, ಮಕ್ಕಳ ಲಾಲನೆ, ಪಾಲನೆಗೆ ಸೂಕ್ತ ಸೌಲಭ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ. ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಇಂತಹ ಕೇಂದ್ರಗಳು ಅಗತ್ಯವಾಗಿವೆ ಎಂದರು.
10ವರ್ಷದವರಗೆ ಮಕ್ಕಳ ಆರೈಕೆ ಅತ್ಯಂತ ಮುಖ್ಯವಾಗಿದೆ. ಇಂತಹ ಸಮಯದಲ್ಲಿ ಮಕ್ಕಳ ಲಾಲನೆ, ಪೋಷಣೆ ಬಹಳ ಮುಖ್ಯ. ಮಕ್ಕಳು ಆರೋಗ್ಯವಂತರಾಗಿದ್ದಾಗ ಭವಿಷ್ಯದಲ್ಲಿ ಸದೃಢ ಸಮಾಜ ಕಟ್ಟಲು ಸಾಧ್ಯ. ಇಂತಹ ಆಟಾಟೋಪಗಳಿಂದ ಮಕ್ಕಳು ದೈಹಿಕವಾಗಿ ಮತ್ತಷ್ಟು ಚುರುಕಾಗುತ್ತಾರೆ.ಸರ್ಕಾರಿ ಮಹಿಳಾ ಸಿಬ್ಬಂದಿಗಳಿಗೆ ನೀಡಬೇಕಾದ ಸೌಲಭ್ಯ, ಸವಲತ್ತುಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದರು.
“ಡೇ ಕೇರ್ ಸೆಂಟರ್” ನಿಂದ ಉದ್ಯೋಗದಲ್ಲಿರುವ ದಂಪತಿಗಳಿಗೆ, ಅದರಲ್ಲೂ ನಿರ್ದಿಷ್ಟವಾಗಿ ಹತ್ತು ವರ್ಷ ವಯೋಮಿತಿಯೊಳಗಿನ ಮಕ್ಕಳನ್ನು ಹೊಂದಿರುವ ಪಾಲಕರಿಗೆ ಅನುಕೂಲವಾಗಿದೆ. ಮಕ್ಕಳು ಸಹ ತಂದೆ – ತಾಯಿ ಜೊತೆ ಬೆರೆಯಲು, ಅವರ ಕಣ್ಗಾವಲಿನಲ್ಲಿ ಬೆಳೆಯಲು ಈ ಕೇಂದ್ರ ಸಹಕಾರಿಯಾಗಿದೆ.
ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಕೆಲಸ ನಿರ್ವಹಿಸಲು ಇಂತಹ ವಾತಾವರಣ ಸೂಕ್ತವಾಗಿದೆ. ಮಹಿಳೆಯರ ಉದ್ಯೋಗದ ಸ್ಥಳದಲ್ಲಿ ಮಕ್ಕಳ ಡೇ ಕೇರ್ ಆರಂಭಿಸಿರುವುದರಿಂದ ತಾಯಂದಿರು ನಿರಾಳವಾಗಿ ಕೆಲಸ ಮಾಡಬಹುದು. ಮಧ್ಯಾಹ್ನ ಉಟದ ಸಮಯದಲ್ಲಿ ಮಕ್ಕಳ ಜೊತೆಯಲ್ಲಿ ಇರಬಹುದು. ಭೋಜನ ಸವಿದು ಮಕ್ಕಳ ಬೇಕು – ಬೇಡಗಳನ್ನು ನೋಡಿಕೊಳ್ಳಬಹುದಾಗಿದೆ.
ಆರೋಗ್ಯಸೌಧದ ಡೇ ಕೇರ್ ನಲ್ಲಿ ಗರಿಷ್ಠ 20 ಮಕ್ಕಳ ಆರೈಕೆಗೆ ಅವಕಾಶ ಕಲ್ಪಿಸಬಹುದಾಗಿದೆ. ವಿನೂತನ ಶೈಲಿಯ ನೆಲದ ಹಾಸಿಗೆ, ರಬ್ಬರ್ ಮ್ಯಾಟ್ ಅಂಬೆಗಾಲಿಡುವ ಮಕ್ಕಳಿಂದ ಪ್ರಾಥಮಿಕ ಶಾಲೆ ಪ್ರವೇಶಿಸುವ ವಿದ್ಯಾರ್ಥಿ ಹಂತದವರೆಗೆ ಉಪಚಾರಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಕ್ಕಳ ಚಟುವಟಿಕೆಗಾಗಿ ಆಟಿಕೆಗಳನ್ನು ಆಳವಡಿಸಲಾಗಿದೆ.
ಆರೋಗ್ಯ ಸೌಧದ ಐಇಸಿ ಶಿಕ್ಷಣ ವಿಭಾಗದಲ್ಲಿ ಕೆಲಸ ಮಾಡುವ ಪಾರ್ವತಿ ಮಾತನಾಡಿ, ನನ್ನ ಮಗ ಪ್ರೀತಮ್ ಗೆ ಎರಡು ವರ್ಷ . ತುಂಬಾ ತುಂಟನಾಗಿರುವ ಮಗನನ್ನು ನೋಡಿಕೊಳ್ಳಲು ಈ ಕೇಂದ್ರ ಅನುಕೂಲವಾಗಿದೆ. ತಮ್ಮ ಪತಿ ಕೂಡ ಕೆಲಸ ಮಾಡುತ್ತಿರುವುದರಿಂದ ಮಗುವಿನ ಆರೈಕೆಗೆ ಇಲ್ಲಿ ಉತ್ತಮ ವ್ಯವಸ್ಥೆಯಿದೆ. ಮಗನಿಗೂ ಇದರಿಂದ ತುಂಬಾ ಖುಷಿಯಾಗಿದ್ದು, ಉತ್ತಮ ರೀತಿಯಲ್ಲಿ ಮಕ್ಕಳನ್ನು ಆರೈಕೆ ಮಾಡಲು ಸಾಧ್ಯವಾಗಲಿದೆ ಎಂದರು.
ಎಚ್.ಡಬ್ಲ್ಯೂ, ಸಿ ಕೇಂದ್ರದಲ್ಲಿ ಸಮಾಲೋಚಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಸ್ಫೂರ್ತಿ ಮಾತನಾಡಿ, ನನ್ನ ಮಗನ ಹೆಸರು ಶೌರ್ಯ. ಆತನಿಗೆ ಈ ಕೇಂದ್ರ ಅಚ್ಚುಮೆಚ್ಚಾಗಿದೆ. ಆರೋಗ್ಯ ಸೌಧದಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿದ್ದು, ಇಂತಹ ವಿನೂತನ ಕೇಂದ್ರ ಸ್ಥಾಪನೆ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಮಹಿಳೆಯರೂ ಪುರುಷರಂತೆ ಸರಿ ಸಮಾನವಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿ ಈ ಡೇ ಕೇರ್ ಸಹಕಾರಿಯಾಗಲಿ ಪ್ರಾಯೋಗಿಕ ಪ್ರಯತ್ನಕ್ಕೆ ಶುಭವಾಗಲಿ.

Latest Stories

LEAVE A REPLY

Please enter your comment!
Please enter your name here